ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರುತೆರೆ ಕಲಾವಿದರಿಂದ ಚುನಾವಣಾ ಪ್ರಚಾರ

Last Updated 21 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಬಸವನಗುಡಿ ವಿಧಾನಸಭಾ ಕ್ಷೇತ್ರದ ಎಸ್‌ಯುಸಿಐ (ಸಿ) ಪಕ್ಷದ ಅಭ್ಯರ್ಥಿ ಎನ್.ರವಿ ಅವರ ಪರ ಕಿರುತೆರೆ ಕಲಾವಿದರು ಭಾನುವಾರ ಪ್ರಚಾರ ನಡೆಸಿದರು. ಹನುಮಂತನಗರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಯಿತು.

ಮನೆ ಮನೆಗೆ ತೆರಳಿ ಮತ ಯಾಚಿಸಿದ ರವಿ, ಅಭಿವೃದ್ಧಿ ಮತ್ತು ಹೊಸತನಕ್ಕಾಗಿ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಿರುತೆರೆ ನಿರ್ದೇಶಕ ಬಿ.ಸುರೇಶ, `ಇದುವರೆಗೂ ಕೆಟ್ಟ ಸರ್ಕಾರಗಳನ್ನು ನೋಡಿದ್ದಾಗಿದೆ. ಇನ್ನು ಮುಂದಾದರೂ ಹೊಸಬರನ್ನು ಗೆಲ್ಲಿಸಿ. ಹೊಸತನದಿಂದ ಮಾತ್ರ ಬದಲಾವಣೆ ತರಲು ಸಾಧ್ಯ. ಸಮಾಜದ ಬಗ್ಗೆ ಕಾಳಜಿ ಇರುವ, ಪ್ರಗತಿಪರ ಚಿಂತನೆಗಳಿರುವ ರವಿ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ' ಎಂದು ಮನವಿ ಮಾಡಿದರು.

ಪ್ರಕಾಶ್ ಅರಸ್ ಸೇರಿದಂತೆ ಹಲವು ಕಿರುತೆರೆ ನಟರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಕರಪತ್ರಗಳನ್ನು ಹಂಚಿ ಮತ ಯಾಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT