ಬದೆರ್ವಾ (ಪಿಟಿಐ): ಕಿಷ್ತ್ವಾರ್ ಹಾಗೂ ದೋಡಾ ಜ್ಲ್ಲಿಲೆಗಳಲ್ಲಿ ಭಾನುವಾರ ಬೆಳಿಗ್ಗೆ ಭೂಮಿ ಕಂಪಿಸಿದ್ದು, ಜನರು ಆತಂಕಕ್ಕೆ ಒಳಗಾದರು.
ಬೆಳಿಗ್ಗೆ 8 ಗಂಟೆಗೆ ಜಮ್ಮು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ರಿಕ್ಟರ್ ಮಾಪನದಲ್ಲಿ 3.4 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಡಿಮೆ ತೀವ್ರತೆಯ ಭೂಕಂಪನದ ಕಾರಣ ಯಾವುದೇ ಹಾನಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.