ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂಭಾಭಿಷೇಕ ಮಹೋತ್ಸವ

Last Updated 12 ಡಿಸೆಂಬರ್ 2013, 19:33 IST
ಅಕ್ಷರ ಗಾತ್ರ

ಯಲಹಂಕ: ಜಾಲಾ ಹೋಬಳಿ ಮರಳು­ಕುಂಟೆ ಗ್ರಾಮದಲ್ಲಿ ನಡೆದ ಪದ್ಮಾವತಿ ಅಮ್ಮನವರ ಸಮೇತ ಲಕ್ಷ್ಮೀ­ವೆಂಕಟರಮಣಸ್ವಾಮಿ ದೇವಾಲಯದ ಜೀರ್ಣೋ­ದ್ಧಾರ ಮತ್ತು ಕುಂಭಾಭಿ­ಷೇಕ ಮಹೋ­ತ್ಸವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಸಚಿವ ಕೃಷ್ಣಬೈರೇಗೌಡ, ಹೆಚ್ಚಿನ ಸಂಖ್ಯೆಯಲ್ಲಿ ರೈತ ಕುಟುಂಬಗಳೇ ವಾಸವಾಗಿರುವ ಈ ಗ್ರಾಮದಲ್ಲಿ ಎಲ್ಲರೂ ಸೇರಿ ಸುಮಾರು 5 ವರ್ಷ­ಗಳ ಸತತ ಪ್ರಯತ್ನದಿಂದ ಪುರಾತನ ಶೈಲಿ­ಯಲ್ಲಿ ಸುಂದರವಾದ ದೇವಾಲಯ­­ವನ್ನು ನಿರ್ಮಿಸಿರುವುದು ವಿಶೇಷವಾ­ಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಜಿ ಲೋಕಸಭಾ ಸದಸ್ಯ ಸಿ.ನಾರಾಯಣ­ಸ್ವಾಮಿ, ಮಾಜಿ ಸಚಿವ ಎಚ್‌.ಎಂ. ರೇವಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT