ಮುಖಂಡ ಮಹದೇವು ಮಾತನಾಡಿ, ಕದಲೂರು ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೆ ಪೂರೈಸಲಾಗುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಮಹಿಳೆಯರು, ಮಕ್ಕಳು ಕುಡಿಯುವ ನೀರಿಗಾಗಿ ಖಾಸಗಿ ಪಂಪ್ ಮನೆಗಳನ್ನು ಆಶ್ರಯಿಸಬೇಕಾದ ಪರಿಸ್ಥಿತಿ ಒದಗಿದೆ. ಕುಡಿಯುವ ನೀರಿನ ಸಮರ್ಪಕ ಪೂರೈಕೆ ಕುರಿತು ಪಿಡಿಓ ಅವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಮೀನಾಕ್ಷಿ, ಮುಖಂಡರಾದ ರಮೇಶ್, ಚೆನ್ನಮ್ಮ, ಸರೋಮ್ಮ, ಮರಗಮ್ಮ, ಚಿಕ್ಕೋಳಮ್ಮ, ಲಿಂಗಮ್ಮ, ಮಂಜುಳ, ಲೀಲಾ, ಕೆಂಪಮ್ಮ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.