ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಮಿತ ಬಳಕೆಗೆ ಮನವಿ

Last Updated 13 ಜೂನ್ 2011, 19:30 IST
ಅಕ್ಷರ ಗಾತ್ರ

ಕೆಂಗೇರಿ: ನಾಗರಿಕರು ಕುಡಿಯುವ ನೀರಿನ ಅಭಾವ ಅರಿತು ಮಿತವಾಗಿ ಬಳಸಲು ಮುಂದಾಗಬೇಕು ಎಂದು ಬಿಬಿಎಂಪಿ ಸದಸ್ಯ ಎಂ.ಬಿ. ಗೋವಿಂದೇಗೌಡ ಮನವಿ ಮಾಡಿದರು.

 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಗ್ಗನಹಳ್ಳಿ ವಾರ್ಡ್‌ನ ಮಾರುತಿ ನಗರದಲ್ಲಿ ಕೊಳವೆಬಾವಿ ಮೂಲಕ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

`ಈ ಹಿಂದೆ ವಾರ್ಡ್ ವ್ಯಾಪ್ತಿಯ ಕೆಲವು ಪ್ರದೇಶಗಳು ಗ್ರಾಮೀಣ ಪ್ರದೇಶಗಳಿಗೆ ಸೇರಿದ್ದರಿಂದ ಬಿಬಿಎಂಪಿ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಾಗದೆ ಜನತೆ ತೊಂದರೆ ಅನುಭವಿಸುವಂತಾಯಿತು. ಇದೀಗ ವಾರ್ಡ್‌ನಲ್ಲಿ ನೀರಿನ ಬವಣೆ ನೀಗಿಸಲು ಬಿಬಿಎಂಪಿ ವತಿಯಿಂದ 13 ಕೊಳವೆ ಬಾವಿಗಳನ್ನು ಕೊರೆಸಲಾಗಿದ್ದು, ಅವುಗಳಲ್ಲಿ ಹನ್ನೊಂದರಲ್ಲಿ ನೀರು ದೊರೆತಿದೆ~ ಎಂದು ಅವರು ಹೇಳಿದರು.

`ನಿರುದ್ಯೋಗಿಗಳಿಗಾಗಿ ಸ್ವಯಂ ಉದ್ಯೋಗ ಕೈಗೊಳ್ಳಲು ತರಬೇತಿ ನೀಡಲಾಗುವುದು. ಅರ್ಹ ನಿರುದ್ಯೋಗಿಗಳು ತರಬೇತಿ ಪಡೆದು ಸ್ವಯಂ ಉದ್ಯೋಗ ಕೈಗೊಳ್ಳಬೇಕು~ ಎಂದರು.

ಮುಖಂಡರಾದ ಎಂ.ಬಿ.ಗಂಗಾಧರ್, ಶಿವಣ್ಣ, ನಿಂಗಪ್ಪ, ಭೀಮಣ್ಣ, ಆಂಜನಪ್ಪ ಮುಂತಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT