ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಂಧ್ಯಾ ಅವರು `ಜೆಡಿಎಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳಿಲ್ಲ. ಕುಮಾರಸ್ವಾಮಿ ಅವರನ್ನು ಪಕ್ಷದ ವತಿಯಿಂದಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ದೇವೇಗೌಡರ ಸ್ವಹಿತಾಸಕ್ತಿ ಇಲ್ಲ~ ಎಂದು ತಿಳಿಸಿದರು.
`ಕುಮಾರಸ್ವಾಮಿ ಅವರು ಅತ್ಯಂತ ಜನಪ್ರೀಯ ನಾಯಕರಾಗಿದ್ದು, ಅವರಿಗೆ ಅಪಾರ ಜನ ಬೆಂಬಲವಿದೆ~ ಎಂದ ಸಿಂಧ್ಯಾ, `ನಾನು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ~ ಎಂದು ಸ್ಪಷ್ಟಪಡಿಸಿದರು.
ಇತ್ತೀಚೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್ನಲ್ಲಿ ಕುಮಾರಸ್ವಾಮಿಗಿಂತ ಸಾಕಷ್ಟು ಹಿರಿಯರು ನಾಯಕರಿದ್ದು ಅವರಲ್ಲಿ ಒಬ್ಬರನ್ನು ದೇವೇಗೌಡರು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ ಚುನಾವಣೆ ಎದುರಿಸಲಿ ಎಂದು ದೇವೇಗೌಡರಿಗೆ ಸವಾಲು ಹಾಕಿದ್ದರು.