ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ಮೈಸೂರು ಮನೆ ಅಭಿವೃದ್ಧಿಯಾಗಲಿ

Last Updated 19 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಅಂತರರಾಷ್ಟ್ರೀಯ ಮನ್ನಣೆ ಗಳಿಸಿದ್ದ ಇಂಗ್ಲಿಷ್ ಸಾಹಿತ್ಯ ದಿಗ್ಗಜ ಆರ್. ಕೆ. ನಾರಾಯಣ್ ಅವರ ಮೈಸೂರು ಮನೆಯನ್ನು ಸಾಂಸ್ಕೃತಿಕ ಕೇಂದ್ರವಾಗಿ ಸರ್ಕಾರವೇ ಮುಂದೆನಿಂತು ಅಭಿವೃದ್ಧಿಪಡಿಸಿರುವುದು ಶ್ಲಾಘನೀಯ.
 
ಅದೇ ರೀತಿ ಕನ್ನಡದ ಮಹಾಕವಿ ಕುವೆಂಪು ಅವರ ಮೈಸೂರು ಮನೆಯನ್ನು `ಆದರ್ಶ ಜೀವನ~ದ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ.

ಕುವೆಂಪು ಅವರ ಹುಟ್ಟೂರು ಕುಪ್ಪಳಿಯ ಮನೆಯನ್ನು ಸರ್ಕಾರ ಸ್ಮಾರಕವಾಗಿ ಅಭಿವೃದ್ಧಿ ಪಡಿಸಿದೆ.  ಅವರ ಮೈಸೂರಿನ ಮನೆ ಅವರ ಸಾಹಿತ್ಯ ರಚನೆಗೆ ಪ್ರೇರಣೆ ನೀಡಿದ ತಾಣ. ಉದಯ ರವಿಯನ್ನು `ಜೀವನ ಪ್ರೇರಣಾ ಕೇಂದ್ರ~ವನ್ನಾಗಿ ಅಭಿವೃದ್ಧಿಪಡಿಸಬೇಕೆಂಬ ಬೇಡಿಕೆಯನ್ನು ಸಹಾನುಭೂತಿಯಿಂದ ಪರಿಶೀಲಿಸಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT