ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ವಿವಿ ದೂರ ಶಿಕ್ಷಣ ಪರೀಕ್ಷಾ ಕೇಂದ್ರದ ಮೇಲೆ ದಾಳಿ

Last Updated 23 ಸೆಪ್ಟೆಂಬರ್ 2013, 7:01 IST
ಅಕ್ಷರ ಗಾತ್ರ

ಕೊಪ್ಪಳ: ಪರೀಕ್ಷಾ ಅಕ್ರಮ ಎಸಗುತ್ತಿದ್ದ ಇಲ್ಲಿನ ಕುಣಿಕೇರಿಯ ಹೇಮರೆಡ್ಡಿ ಮಲ್ಲಮ್ಮ ವಿದ್ಯಾ ಸಂಸ್ಥೆಯಲ್ಲಿನ ಕುವೆಂಪು ವಿವಿ ದೂರ ಶಿಕ್ಷಣ ಪರೀಕ್ಷಾ ಕೇಂದ್ರದ ಮೇಲೆ ಉಪವಿಭಾಗಾಧಿಕಾರಿ ಮಂಜುನಾಥ್‌ ನೇತೃತ್ವದಲ್ಲಿ ಭಾನುವಾರ ದಾಳಿ ನಡೆದಿದೆ.

ನಿರಂತರ ಅಕ್ರಮಗಳು ಮುಂದುವರಿ­ದಿರುವುದು ಹಾಗೂ ಈ ಕುರಿತು ಮಾಧ್ಯ­ಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಪಿ. ಮೋಹ­ನರಾಜ್‌ ನಿರ್ದೇಶನದ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಉತ್ತರ ಪತ್ರಿಕೆ ವಶಪಡಿಸಿಕೊಂಡರು. ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ 26 ಮಂದಿಯ ಉತ್ತರ ಪತ್ರಿಕೆ ವಶಪಡಿ­ಸಿಕೊಂಡು ಅಲ್ಲಿನ ದಾಖಲಾತಿ ಪರಿ­ಶೀಲಿಸಿ ವಿವಿ ಮೇಲ್ವಿಚಾರಕರಿಗೆ ಹಸ್ತಾಂತರಿಸಿದರು.

ಇಂಥ ಕೇಂದ್ರಗಳಲ್ಲಿ ನಿರಂತರ ಅಕ್ರಮಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದ ಬಗ್ಗೆ ವಿವಿಗೆ ಮಾಹಿತಿ ನೀಡಲಾಗಿದೆ. ವಿವಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಉಳಿದಂತೆ ಕೇಂದ್ರ­ವನ್ನು ರದ್ದುಪಡಿಸುವುದು ಅಥವಾ ಕಾನೂನು ಕ್ರಮ ಜರುಗಿಸುವುದು ಜಿಲ್ಲಾಧಿಕಾರಿ ನಿರ್ಧಾರಕ್ಕೆ ಸಂಬಂಧಿಸಿದೆ ಎಂದು ಉಪವಿಭಾಗಾಧಿಕಾರಿ ಮಂಜುನಾಥ್‌ ತಿಳಿಸಿದರು. ವಾರ್ತಾಧಿಕಾರಿ ಬಿ.ವಿ.ತುಕಾರಾಮ್‌ ದಾಳಿ ಸಂದರ್ಭ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT