ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರ: ಉಚಿತ ನೇತ್ರ ತಪಾಸಣಾ ಶಿಬಿರ

Last Updated 6 ಸೆಪ್ಟೆಂಬರ್ 2013, 6:54 IST
ಅಕ್ಷರ ಗಾತ್ರ

ಕುಶಾಲನಗರ: ಕುಶಾಲನಗರ ಜೆಸಿಐ ಸಂಸ್ಥೆ ಮತ್ತು ವಾಸನ್ ಐಕೇರ್ ಆಸ್ಪತ್ರೆಗಳ ಸಹಯೋಗದಲ್ಲಿ ಗುರುವಾರ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.

ಶಿಬಿರವನ್ನು ಕುಶಾಲನಗರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಕೆ.ಎಲ್. ಗಣೇಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ಸಂಘ ಸಂಸ್ಥೆಗಳು ನಡೆಸುವ ಕಾರ್ಯಕ್ರಮಗಳನ್ನು ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳುವಂತಾಗಬೇಕು ಎಂದರು.

ಕುಶಾಲನಗರ ಜೆಸಿಐ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿದರು. ಶಿಬಿರದ ಆರಂಭದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಿವೃತ್ತ ಶಿಕ್ಷಕ ನಜೀರ್ ಮಾಸ್ಟರ್ ಅವರಿಗೆ ತಪಾಸಣೆ ಮಾಡಲಾಯಿತು.

ವಾಸನ್ ಐಕೇರ್ ಆಸ್ಪತ್ರೆಯ ನೇತ್ರ ವೈದ್ಯ ಮಂಜೇಶ್ ಮತ್ತು ನಿದೀಶ್ ಅವರು ನೂರಾರು ರೋಗಿಗಳ ಕಣ್ಣಿನ ತಪಾಸಣೆ ಮಾಡಿದರು. ಕಾರ್ಯಕ್ರಮದಲ್ಲಿ ಶಿಬಿರ ವ್ಯವಸ್ಥಾಪಕ ರೋಷನ್ ತಿಮ್ಮಯ್ಯ, ಜೆಸಿಐ ಪ್ರಧಾನ ಕಾರ್ಯದರ್ಶಿ ಮಧು ಎಚ್.ಎಸ್. ಕಾರ್ಯಕ್ರಮ ನಿರ್ದೇಶಕ ಬಾಲಕೃಷ್ಣ ರೈ, ಜೆಸಿಐ ವಲಯ ಕಾರ್ಯದರ್ಶಿ ರಾಜೇಂದ್ರ ಪದಾಧಿಕಾರಿಗಳಾದ ಚಂದ್ರಶೇಖರ್, ಅಮೃತರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT