ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು (ಆರ್ಟಿಇ) ಅನುಷ್ಠಾನದ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸಬೇಕೆಂಬುದು ರಾಜ್ಯ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಸೋಮವಾರದಿಂದ ನಡೆಸುತ್ತಿದ್ದ ಶಾಲಾ ಬಂದ್ ಅನ್ನು ಬುಧವಾರ ಹಿಂದಕ್ಕೆ ಪಡೆದಿದೆ.
ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಾರದೆಂಬ ಉದ್ದೇಶದಿಂದ ಬಂದ್ ವಾಪಸ್ ಪಡೆಯಲಾಗಿದ್ದು, ಸರ್ಕಾರದ ನಿಲುವಿನ ಬಗ್ಗೆ ಕಾನೂನು ಹೋರಾಟ ನಡೆಸುವುದಾಗಿ ಕುಸ್ಮಾ ಕಾರ್ಯದರ್ಶಿ ಎ.ಮರಿಯಪ್ಪ ಹೇಳಿದ್ದಾರೆ.