ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡುಂಕುಳಂ ಯೋಜನೆಗೆ ವಿರೋಧ: ಜಯಲಲಿತಾಗೆ ಪ್ರಧಾನಿ ಎಚ್ಚರಿಕೆ

Last Updated 12 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  `ಪ್ರತಿಭಟನೆ ಹಿನ್ನೆಲೆಯಲ್ಲಿ ಕೂಡುಂಕುಳಂನಲ್ಲಿ ಅಣುಸ್ಥಾವರದಿಂದ ವಿದ್ಯುತ್ ಉತ್ಪಾದನೆ ಆಗದಿದ್ದರೆ ರಾಜ್ಯದ ಅಭಿವೃದ್ಧಿ ಯೋಜನೆಗಳು ಕುಂಠಿತಗೊಳ್ಳುತ್ತವೆ~ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಬುಧವಾರ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಜಯಲಲಿತಾ ಅವರಿಗೆ ಪತ್ರ ಬರೆದಿರುವ ಸಿಂಗ್, ಯೋಜನೆ ಕೈಬಿಡುವಂತೆ ಆಗ್ರಹಿಸಿ ಕಳೆದ ವಾರ ತಮ್ಮನ್ನು ಭೇಟಿಯಾದ ಸರ್ವ ಪಕ್ಷ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ.

ಕೂಡುಂಕುಳಂ ಅಣುಸ್ಥಾವರದ ಘಟಕ 1 ಹಾಗೂ 2ರಿಂದ ಉತ್ಪಾದನೆಯಾಗುವ 2000 ಮೆಗಾ ವಾಟ್ ವಿದ್ಯುತ್‌ನಲ್ಲಿ ತಮಿಳುನಾಡಿಗೆ 925 ಮೆಗಾ ವಾಟ್ ವಿದ್ಯುತ್ ನೀಡಲಾಗುತ್ತದೆ. ಒಂದು ವೇಳೆ ವಿದ್ಯುತ್ ಉತ್ಪಾದನೆಯು ಏಕಾಏಕಿ ನಿಂತಲ್ಲಿ ರಾಜ್ಯದ ಅಭಿವೃದ್ಧಿ ಹಾಗೂ ಕೈಗಾರಿಕಾ ಯೋಜನೆಗಳಿಗೆ ತೊಡಕುಂಟಾಗುತ್ತದೆ ಎಂದಿದ್ದಾರೆ.

ಭಾರತ- ರಷ್ಯ ಯೋಜನೆಯಾದ ಕೂಡುಂಕುಳಂ ಅಣು ವಿದ್ಯುತ್ ಯೋಜನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಈ ಪತ್ರ ಬರೆದಿದ್ದಾರೆ.

ತಿರುನಲ್ವೇಲಿ ವರದಿ: ಕೂಡುಂಕುಳಂ ಯೋಜನೆ ವಿರೋಧಿಸಿ ನೂರಾರು ಚಳವಳಿಗಾರರು ಉದ್ದೇಶಿತ ಘಟಕ ಸ್ಥಾಪನೆ ಸ್ಥಳಕ್ಕೆ ಸಮೀಪದ ಪ್ರದೇಶದಿಂದ ಇಡಿಂತಕರೈ ಎಂಬ ಗ್ರಾಮದವರೆಗೆ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT