ನವದೆಹಲಿ (ಪಿಟಿಐ): ಕೂಡುಂಕುಳಂ ಪರಮಾಣು ಸ್ಥಾವರದ ಸುತ್ತಮುತ್ತ ಪ್ರಸ್ತುತ ಇರುವ ಪರಿಸ್ಥಿತಿಯು ನಾಲ್ಕೈದು ವಾರಗಳಲ್ಲಿ ಸಹಜ ಸ್ಥಿತಿಗೆ ಮರಳುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಭಾರತೀಯ ಪರಮಾಣು ವಿದ್ಯುತ್ ನಿಗಮ (ಎನ್ಪಿಸಿಐಎಲ್), ಆಗಸ್ಟ್ ವೇಳೆಗೆ ಸ್ಥಾವರ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ ಎಂದು ಹೇಳಿದೆ.