ಲಂಡನ್ (ಪಿಟಿಐ): ತಮಿಳುನಾಡಿನ ಸುನಾಮಿ ಸಂಭಾವ್ಯ ಪ್ರದೇಶವಾದ ಕೂಡುಂಕುಳಂನಲ್ಲಿ ನಿರ್ಮಿಸಲಾಗುತ್ತಿರುವ ಅಣು ವಿದ್ಯುತ್ ಸ್ಥಾವರ ವಿರೋಧಿಸಿರುವ ಬ್ರಿಟನ್ನ ಕೆಲ ಜನಪ್ರತಿನಿಧಿಗಳು ಈ ಸಂಬಂಧ ಪ್ರಧಾನಮಂತ್ರಿ ಡಾ. ಮನಮೋಹನ ಸಿಂಗ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಪತ್ರ ಬರೆದು ಎಚ್ಚರಿಸಿದ್ದಾರೆ.
ಸುನಾಮಿ ಸಂಭಾವ್ಯ ಪ್ರದೇಶದ ವ್ಯಾಪ್ತಿಗೆ ಒಳಪಡುವ ಈ ಸ್ಥಾವರ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ)ಯ ಸುರಕ್ಷಾ ನಿರ್ದೇಶನಗಳನ್ನು ಉಲ್ಲಂಘಿಸಿದ್ದು, ಸ್ಥಾವರ ನಿರ್ಮಾಣವಾದಲ್ಲಿ ಈ ಭಾಗದಲ್ಲಿ ನೀರಿಗೆ ತೀವ್ರ ಬರ ಉಂಟಾಗಲಿದೆ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.
ಈ ಸಂಬಂಧ ಲಂಡನ್ನಲ್ಲಿರುವ ಭಾರತದ ರಾಯಭಾರ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು ಎಂದು ಸೌತ್ ಏಷಿಯಾ ಸಾಲಿಡಾರಿಟಿ ಗ್ರೂಪ್ನ ಅಮೃತ್ ವಿಲ್ಸನ್ ತಿಳಿಸಿದರು.