ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಲಿ ಹೆಚ್ಚಳಕ್ಕೆ ಹಮಾಲಿ ಕಾರ್ಮಿಕರ ಆಗ್ರಹ

Last Updated 7 ಜನವರಿ 2014, 7:01 IST
ಅಕ್ಷರ ಗಾತ್ರ

ಕುಣಿಗಲ್: ಅನ್ನಭಾಗ್ಯ ಯೋಜನೆಯ ಜಾರಿಗೆ ಶ್ರಮಿಸುತ್ತಿರುವ ಹಮಾಲಿ ಕಾರ್ಮಿಕರು ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಸೋಮ­ವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಟಿಎಪಿಸಿಎಂಎಸ್ ಗೋದಾಮಿನ ಮುಂದೆ ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆಯಡಿ ಒಟ್ಟು­ಗೂಡಿದ ತಾಲ್ಲೂಕು ಅನ್ನಭಾಗ್ಯ ಯೋಜನೆಯ ಹಮಾಲರು, ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಖಂಡ ವೆಂಕಟೇಶ್, ಅನ್ನಭಾಗ್ಯ ಯೋಜನೆಯಡಿಯಲ್ಲಿ ಸಗಟು ಅಹಾರ ಗೋದಾಮುಗಳಲ್ಲಿ ಅಹಾರ ಧಾನ್ಯಗಳ ಸಾಗಣೆ, ಇಳಿಸುವ, ತುಂಬುವ ಕೆಲಸ ಮಾಡುವ ಹಮಾಲ­ರಿಗೆ, ಕ್ವಿಂಟಲ್‌ಗೆ ಕೇವಲ ರೂ. 6 ಕೂಲಿ ಸಿಗುತ್ತಿದೆ. ಇಎಸ್‌ಐ, ಪಿಎಫ್ ಸೇರಿದಂತೆ ಯಾವುದೇ ಸವಲತ್ತು ಸಿಗುತ್ತಿಲ್ಲ ಎಂದು ದೂರಿದರು.

ರಾಜ್ಯ ಸರ್ಕಾರವೆ ಕ್ವಿಂಟಲ್‌ಗೆ ರೂ. 18 ನೀಡುವಂತೆ ಶಿಫಾರಸ್ಸು ಮಾಡಿದ್ದರೂ, ಅದನ್ನು ಜಾರಿಗೆ ತರುವಲ್ಲಿ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ದೂರಿದರು. ಪ್ರಮುಖರಾದ ನಟರಾಜ್, ಮೆಹಬೂಬ್, ರಮೇಶ, ಕೃಷ್ಣಪ್ಪ, ರಾಜಣ್ಣ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT