ಕೆಲ ರೈತ ಸಂಘಟನೆಗಳು ತಮ್ಮ ಸ್ವಾರ್ಥ ಸಾಧನೆಗಾಗಿ ಕೆಲ ರಾಜಕಾರಣಿಗಳ ಬೆನ್ನುಹತ್ತಿ ರೈತರನ್ನು ವಂಚಿಸುತ್ತಿವೆ' ಎಂದ ಅವರು, ಹೆಣ್ಣುಮಕ್ಕಳು ಶೌಚಾಲಯ ಇಲ್ಲದ ಮನೆಗೆ ಮದುವೆಯಾಗಿ ಹೋಗುವುದಿಲ್ಲ ಎಂದು ಹೇಳಿ ಗಂಡನ ಮನೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಆಗ್ರಹಿಸಬೇಕು ಎಂದರು.
ಶಾಸಕ ವಿ.ಎಸ್.ಪಾಟೀಲ ಮಾತನಾಡಿ, ಕೃಷಿಗೆ ಹೆಚ್ಚಿನ ಒತ್ತು ನೀಡಬೇಕಾದ ಅವಶ್ಯಕತೆಯಿದೆ ಎಂದರು. ಕಾಂಗ್ರೆಸ್ ಮುಖಂಡ ಶಿವರಾಮ ಹೆಬ್ಬಾರ, ಜಿಲ್ಲಾ ಪಂಚಾತಿ ಸದಸ್ಯ ಅಶೋಕ ಸಿರ್ಸಿಕರ, ಯೋಜನಾಧಿಕಾರಿ ಅಮರಪ್ರಸಾದ ಶೆಟ್ಟಿ ಮಾತನಾಡಿದರು.
ಪ್ರಮೋದ ಹೆಗಡೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಕೆ.ಗಡವಾಲೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕೊಂಡುಬಾಯಿ ಜೋರೆ, ಕೃಷಿಕ ಸಮಾಜದ ಅಧ್ಯಕ್ಷ ಸಂಗಮೇಶ ಬಿದರಿ, ತಹಶೀಲ್ದಾರ ಎಂ.ವಿ.ಕಲ್ಲೂರಮಠ, ಎಸಿಎಫ್ ವಿ.ಆರ್.ಬಸನಗೌಡರ, ಎಸ್.ಕೆ.ಕೆಂಪರಾಜ, ಡಾ.ಎಚ್.ಬಿ.ಬಬಲಾದ ಉಪಸ್ಥಿತರಿದ್ದರು. ರವಿ ಆಲದಕಟ್ಟಿ ಪ್ರಾರ್ಥನೆ ಹಾಡಿದರು. ರವಿರಾಜ ಸ್ವಾಗತಿಸಿದರು. ಮುನಿಸ್ವಾಮಿ ವಂದಿಸಿದರು.