ಎಂಟನೇ ಎಸಿಎಂಎಂ ನ್ಯಾಯಾಲಯ ಕೃಷ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಆದ್ದರಿಂದ ಜಾಮೀನು ಕೋರಿ ಕೃಷ್ಣ ತ್ವರಿತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ನ್ಯಾಯಾಲಯ ಜಾಮೀನು ನೀರಾಕರಿಸಿದೆ. ಇದೇ ನ್ಯಾಯಾಲಯ ಕೃಷ್ಣ ಅವರಿಗೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಕೃಷ್ಣ ಅವರ ಪರ ವಕೀಲರು ತಿಳಿಸಿದ್ದಾರೆ.