ಅರಣ್ಯ ಪ್ರದೇಶ, ಪ್ರಾಣಿ- ಪಕ್ಷಿ ಧಾಮಗಳು ಹಾಗೂ ರಾಷ್ಟ್ರೀಯ ಉದ್ಯಾನಗಳನ್ನು ಘೋಷಿತ ಪ್ರದೇಶದ ವ್ಯಾಪ್ತಿಯಿಂದ ಹೊರಗಿಡಬಾರದೆಂದು ಸುಪ್ರೀಂ ಕೋರ್ಟ್ 2000ನೇ ಇಸವಿ ನವೆಂಬರ್ 13ರಂದು ನೀಡಿರುವ ತೀರ್ಪನ್ನು ಕೃಷ್ಣ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವರ ವಿರುದ್ಧ ಕಾನೂನು ಪ್ರಕ್ರಿಯೆ ಆರಂಭಿಸಲು ಅಟಾರ್ನಿ ಜನರಲ್ ಅನುಮತಿ ಅಗತ್ಯ ಎಂದು ಅರ್ಜಿದಾರರು ಹೇಳಿದ್ದಾರೆ.