ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಪ್ಪ ಕೊಲೆ: ಮತ್ತೆ ನಾಲ್ಕು ಜನರ ಬಂಧನ

Last Updated 6 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ನೆಲಮಂಗಲ:  ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಬಿ.ಎಂ.ಎಲ್. ಕೃಷ್ಣಪ್ಪ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪೇರ್ಲ ಪ್ರಕಾಶ್‌ಗೌಡ (28), ಮಾಗಡಿ ತಾಲ್ಲೂಕಿನ ಮೋಟಗಾನಹಳ್ಳಿ ಗ್ರಾಮದ ಮಂಜುನಾಥ್ (23), ಶ್ರವಣಬೆಳಗೊಳದ ಎನ್.ಎಸ್.ಮಧು (27), ನೆಲಮಂಗಲದ ಎಂ.ಜಿ.ರಸ್ತೆಯ ನಿವಾಸಿ, ಆಟೋ ಚಾಲಕ ಸತೀಶ್ ಅವರನ್ನು ಕೆಂಗೇರಿ ಬಳಿ ಬಂಧಿಸಿ, ಅವರನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಡಿವೈಎಸ್ಪಿ ಕೆ.ಎಂ. ಚಿನ್ನಸ್ವಾಮಿ ತಿಳಿಸಿದ್ದಾರೆ.

ಕೃತ್ಯಕ್ಕೆ ಬಳಸಿದ ಪ್ರಕಾಶ್‌ಗೌಡ ಅವರ ಸ್ಕೋಡಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಆರೋಪಿಗಳನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT