ಜಮ್ಮು (ಐಎಎನ್ಎಸ್): ಸರ್ಕಾರಿ ವಾಹನಗಳ ಮೇಲಿನ ಕೆಂಪು ದೀಪ ದುರ್ಬಳಕೆಯಾಗುತ್ತಿರುವ ಕುರಿತು ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮರುದಿನವೇ ಜಮ್ಮು ಕಾಶ್ಮೀರ ರಾಜ್ಯದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ಪ್ರಸಾದ್ ತಮ್ಮ ವಾಹನದ ಮೇಲಿನ ಕೆಂಪು ದೀಪವನ್ನು ತೆಗೆಸುವ ಮೂಲಕ ಮಾದರಿ ಎನಿಸಿದ್ದಾರೆ.
ರಾಜ್ಯಗಳಲ್ಲಿನ ಪೊಲೀಸ್ ವಾಹನಗಳ ಮೇಲೆ ಅಳವಡಿಸಿರುವ ಕೆಂಪು ದೀಪಗಳನ್ನೂ ತೆಗೆಯಲು ಡಿಜಿಪಿ ಆದೇಶ ನೀಡಿದ್ದಾರೆ.
ಸುಪ್ರೀಂಕೋರ್ಟ್ ಮಂಗಳವಾರ ಆದೇಶಿಸಿದ್ದರ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.