ವಿಜಯಪುರ: `ಬೆಂಗಳೂರು ಕಟ್ಟಿದ ಕೆಂಪೇಗೌಡರ ಜನ್ಮದಿನದಂದು ರಾಜ್ಯ ಸರ್ಕಾರವು ರಜೆ ನೀಡಬೇಕು ಎಂದು ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಶ್ರೀನಿವಾಸಗೌಡ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನಸಂಖ್ಯೆಯಲ್ಲಿ ಒಕ್ಕಲಿಗರು ಯಥೇಚ್ಛವಾಗಿದ್ದಾರೆ.
ಹಾಗಾಗಿ ಕೆಂಪೇಗೌಡರ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ಆಗ್ರಹಿಸಿದರು.
ಕೆಂಪೇಗೌಡರು ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರ. ಕರ್ನಾಟಕದ ಹೆಮ್ಮೆಯ ಪುತ್ರ ಅದಕ್ಕಾಗಿ ಅವರಿಗೆ ಗೌರವ ಸಲ್ಲಿಸಬೇಕಿದ್ದಲ್ಲಿ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕಿದೆ ಎಂದರು.