ಕೃಷ್ಣರಾಜಪುರ: ಮಂಗಳವಾರ ರಾತ್ರಿ ಸುರಿದ ಸತತ ಮಳೆಯಿಂದಾಗಿ ವಿವಿಧ ಬಡಾವಣೆಗಳ ನೂರಕ್ಕೂ ಹೆಚ್ಚು ಮನೆ ಮತ್ತು ಅಂಗಡಿಗಳಿಗೆ ಮಳೆ ನೀರಿನ ಜತೆಗೆ ಚರಂಡಿಯ ಕೊಳಚೆ ನೀರು ನುಗ್ಗಿ ಜನ ಜೀವನಕ್ಕೆ ತೊಂದರೆಯಾಯಿತು.
`ಮುಖ್ಯರಸ್ತೆ ಮತ್ತು ಸಂಪರ್ಕ ರಸ್ತೆಯ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದೆ ನಿಂತು. ಅಲ್ಲಲ್ಲಿ ಚರಂಡಿ ಮೇಲಿನ ಕಲ್ಲುಚಪ್ಪಡಿಗಳನ್ನು ತೆಗೆದು ಅಡ್ಡಾದಿಡ್ಡಿಯಾಗಿ ಸರಿಸಿದ್ದಾರೆ. ಸಾಲದು ಎಂಬಂತೆ ಮುಖ್ಯರಸ್ತೆಯ ಬದಿ ರಾಜಕಾಲುವೆ ಮೇಲೆ ಸಿಮೆಂಟ್ ಕಾಂಕ್ರೆಟ್ ಚಪ್ಪಡಿಗಳನ್ನು ಜೋಡಿಸಿದ್ದಾರೆ.
ಈ ರೀತಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಕೊಳಚೆ ನೀರು ಸರಾಗವಾಗಿ ಹರಿಯದೆ ರಸ್ತೆಗೆ ಮತ್ತು ಅಂಗಡಿಯೊಳಗೆ ನುಗ್ಗುತ್ತಿದೆ~ ಎಂದು ಸಾಮಾಜಿಕ ಕಾರ್ಯಕರ್ತ ರಮೇಶ್ ದೂರಿದರು.
`ಅಂಬೇಡ್ಕರ್ ನಗರ ಸರ್ಕಾರಿ ಶಾಲೆಯ ಮೈದಾನವು ಮಳೆ ಬಂದಾಗಲೆಲ್ಲ ಜಲಾವೃತಗೊಳ್ಳುತ್ತದೆ. ತಗ್ಗು ಪ್ರದೇಶದಲ್ಲಿರುವುದರಿಂದ ಈ ಸಮಸ್ಯೆ ಮರುಕಳಿಸುತ್ತಲೇ ಇದೆ~ ಎಂದು ಅಧಿಕಾರಿಗಳು ತಮ್ಮ ಅಸಹಾಯಕತೆ ಪ್ರದರ್ಶಿಸುತ್ತಾರೆ.