ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಎನ್. ಗುರುಸ್ವಾಮಿ ಕೊಡುಗೆ ಅನನ್ಯ

Last Updated 9 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ನಾರಾಯಣ ಗುರುಗಳ ಆದರ್ಶದಂತೆ ಬದುಕಿದ `ಪ್ರಜಾವಾಣಿ~ ಹಾಗೂ `ಡೆಕ್ಕನ್ ಹೆರಾಲ್ಡ್~ ಪತ್ರಿಕಾ ಸಮೂಹದ ಸಂಸ್ಥಾಪಕರಾದ ಕೆ.ಎನ್. ಗುರುಸ್ವಾಮಿ ಅವರು ಹಿಂದುಳಿದ ಈಡಿಗ ಸಮುದಾಯದ ಏಳಿಗೆಗೆ ಶ್ರಮಿಸಿದ್ದಾರೆ~ ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷ ಜೆ.ಪಿ.ನಾರಾಯಣಸ್ವಾಮಿ ಹೇಳಿದರು.

ಇತ್ತೀಚೆಗೆ ಸಂಘವು ಹಮ್ಮಿಕೊಂಡಿದ್ದ ಸಂಸ್ಥಾಪಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, `ಗುರುಸ್ವಾಮಿ ಹಾಗೂ ಕೆ.ವೆಂಕಟಸ್ವಾಮಿ ಅವರ ಮುಂದಾಲೋಚನೆಯ ಪ್ರತಿಫಲವಾಗಿ ಸುಧಾ ಸಹಕಾರಿ ಬ್ಯಾಂಕ್ ಸ್ಥಾಪನೆಯಾಯಿತು. ಸೋಲೂರಿನ ಆರ್ಯ ಈಡಿಗ ಮಠಕ್ಕೆ ಉತ್ತೇಜನ ದೊರೆಯಿತು~ ಎಂದು ಹೇಳಿದರು.

ಸಹಕಾರ ಸಂಘದ ಜಂಟಿ ನಿಬಂಧಕ ಬಿ.ಎ.ಮಹೇಶ್ವರಪ್ಪ, `ಗುರುಸ್ವಾಮಿ ಹಾಗೂ ವೆಂಕಟಸ್ವಾಮಿ ಅವರು ಈಡಿಗ ಸಮುದಾಯದ ಪಿತಾಮಹರಾಗಿ ಬೆಳೆದಿದ್ದಾರೆ. ಜನಾಂಗವನ್ನು ಶೈಕ್ಷಣಿಕವಾಗಿ ಪ್ರಗತಿ ಪಥದಲ್ಲಿ ಕೊಂಡೊಯ್ಯಲು ಶ್ರಮಿಸಿದ್ದಾರೆ~ ಎಂದು ತಿಳಿಸಿದರು.

ಬೆಂಗಳೂರು ಈಡಿಗ ವಿದ್ಯಾರ್ಥಿ ನಿಲಯದ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಆರ್. ಕೃಷ್ಣಪ್ಪ, `ಗುರುಸ್ವಾಮಿ ಮತ್ತು ಕೆ.ವೆಂಕಟಸ್ವಾಮಿ ಅವರ ಜ್ಞಾಪಕಾರ್ಥವಾಗಿ ನಗರದ ರಸ್ತೆ ಅಥವಾ ವೃತ್ತಕ್ಕೆ ಅವರ ಹೆಸರಿಡಬೇಕು~ ಎಂದು ಮನವಿ ನೀಡಿದರು.

ಪತ್ರಕರ್ತ ವಿ.ವೆಂಕಟೇಶ್ ಮಾತನಾಡಿದರು. ಸಮಾರಂಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಜೆ.ಕಾಳೇಗೌಡ, ಖಜಾಂಚಿ ಕೆ.ಜಿ.ಹನುಮಂತರಾಜು, ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷ ಟಿ.ವಿಜಯ ನರಸಿಂಹಯ್ಯ ಮತ್ತಿತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT