ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಪಿಗೆ ಗೆಲುವು

Last Updated 6 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ತಂಡದವರು ಇಲ್ಲಿ ನಡೆಯುತ್ತಿರುವ ಕೊಡವ ಸಮಾಜ ಆಶ್ರಯದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸ್ಮಾರಕ ರಾಜ್ಯ ಮಟ್ಟದ ಹಾಕಿ ಟೂರ್ನಿಯಲ್ಲಿ ಗೆಲುವು ಪಡೆದರು. ಅಕ್ಕಿ ತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಕೆಎಸ್‌ಪಿ ತಂಡ 3-2 ಗೋಲುಗಳಿಂದ ಆರ್‌ಡಬ್ಲ್ಯು ಎಫ್ ತಂಡವನ್ನು ಮಣಿಸಿ ರೋಚಕ ಗೆಲುವು ಪಡೆಯಿತು.

ಪ್ರಬಲ ಹಣಾಹಣಿಯಿಂದ ಕೂಡಿದ್ದ ಪಂದ್ಯದಲ್ಲಿ ವಿರಾಮದ ವೇಳೆಗೆ ಕೆಎಸ್‌ಪಿ 2-0 ಮುನ್ನಡೆ ಸಾಧಿಸಿತ್ತು. ವಿಜಯಿ ತಂಡದ ಉಮೇಶ್ ಹಾಗೂ ಮಹೇಶ್ ಗೋಲು ಗಳಿಸಿ ತಂಡವನ್ನು ಮುನ್ನಡೆಯತ್ತ ಕೊಂಡೊಯ್ದರು. ಆರ್‌ಡಬ್ಲ್ಯುಎಫ್ ತಂಡದ ಪರ ಗಿರೀಶ್ ಗಣಪತಿ 48ನೇ ನಿಮಿಷದಲ್ಲಿ ಎರಡು ಗೋಲು ಕಲೆ ಹಾಕಿದರು. ಉಭಯ ತಂಡಗಳು ಸಮಬಲ ಸಾಧಿಸಿದ್ದವು. ಉಮೇಶ್ 54ನೇ ನಿಮಿಷದಲ್ಲಿ ಗಳಿಸಿದ ಒಂದು ಗೋಲು ಕೆಎಸ್‌ಪಿ ತಂಡಕ್ಕೆ ಗೆಲುವು ತಂದು ಕೊಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT