ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜೆಪಿ-ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್‌ಗೆ: ಶಂಕರ್

Last Updated 4 ಡಿಸೆಂಬರ್ 2012, 20:15 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: `ಕೆಜೆಪಿ ಹಾಗೂ ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್‌ಗೆ ಆಗಲಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ' ಎಂದು ಮಾಜಿ ಸಚಿವ ಬಿ.ಎಲ್.ಶಂಕರ್ ಅಭಿಪ್ರಾಯಪಟ್ಟರು.ಯಶವಂತಪುರ ವಿಧಾನಸಭಾ ವ್ಯಾಪ್ತಿಯ ದೊಡ್ಡಬಿದರಕಲ್ಲು ವಾರ್ಡ್‌ನ ಸಪ್ತಗಿರಿ ಬಡಾವಣೆ ವಾರ್ಡ್‌ನಲ್ಲಿ ಈಚೆಗೆ ನಡೆದ `ಕಾಂಗ್ರೆಸ್‌ನೊಂದಿಗೆ ಬನ್ನಿ- ಬದಲಾವಣೆ ತನ್ನಿ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ಮಾತನಾಡಿ, `ಜನಸಾಮಾನ್ಯರ ಕಷ್ಟಸುಖಗಳನ್ನು ಅರಿತು ಕೆಲಸ ಮಾಡಬೇಕಾದ ಬಿಜೆಪಿ ಸಚಿವರು ಬರಿ ಒಳಜಗಳದಲ್ಲಿ ಭಾಗಿಯಾಗಿದ್ದು ವಿಪರ್ಯಾಸ' ಎಂದರು. ಕೆಪಿಸಿಸಿ ಉಸ್ತುವಾರಿ ಹನುಮಂತರಾವ್, ಕಾಂಗ್ರೆಸ್ ನಾಯಕ ಎಂ.ಸತೀಶ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT