ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜೆಪಿ ಮಾನ್ಯತೆ ರದ್ದಿಗೆ ಅರ್ಜಿ

Last Updated 2 ಏಪ್ರಿಲ್ 2013, 19:55 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್ ವಿರುದ್ಧ ರಾಜೇಂದ್ರ ಕುಮಾರ್ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಕೆಜೆಪಿಗೆ ನೀಡಿರುವ ಮಾನ್ಯತೆಯನ್ನು ರದ್ದು ಮಾಡುವಂತೆ ಕೋರಿದ್ದಾರೆ.

`ಪದ್ಮನಾಭ ಅವರು ಹೊಟ್ಟೆಪಕ್ಷದ ರಂಗಸ್ವಾಮಿ ಅವರ ಪುತ್ರ ಎಂದು ಹೇಳಿಕೊಂಡಿದ್ದಾರೆ. ಚುನಾವಣಾ ಆಯೋಗಕ್ಕೆ ನೀಡಿರುವ ದಾಖಲೆಗಳಲ್ಲೂ ಅವರು ಇದೇ ಅಂಶ ಉಲ್ಲೇಖಿಸಿದ್ದಾರೆ. ಆಯೋಗಕ್ಕೆ ತಪ್ಪು ಮಾಹಿತಿ ನೀಡಿ, ಕೆಜೆಪಿಗೆ ಮಾನ್ಯತೆ ಪಡೆದುಕೊಂಡಿದ್ದಾರೆ. ಆದರೆ ರಂಗಸ್ವಾಮಿ ಅವರ ಪುತ್ರ ನಾನು, ಪದ್ಮನಾಭ ಅಲ್ಲ' ಎಂದು ರಾಜೇಂದ್ರ ಕುಮಾರ್ ಅರ್ಜಿಯಲ್ಲಿ ಹೇಳಿದ್ದಾರೆ.

`ಕೆಜೆಪಿ ಸ್ಥಾಪನೆ ಕುರಿತು ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಲ್ಲಿ ಪದ್ಮನಾಭ ಸುಳ್ಳು ಮಾಹಿತಿ ನೀಡಿರುವ ಕಾರಣ, ಕೆಜೆಪಿಗೆ ನೀಡಿರುವ ಮಾನ್ಯತೆ ರದ್ದು ಮಾಡುವಂತೆ ಆಯೋಗಕ್ಕೆ ನಿರ್ದೇಶನ ನೀಡಬೇಕು' ಎಂದು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT