ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜೆಪಿಗೆ ಬೆಂಬಲ: ಕ್ರಮಕ್ಕೆ ಡಿವಿಎಸ್ ಆಗ್ರಹ

Last Updated 1 ಡಿಸೆಂಬರ್ 2012, 20:44 IST
ಅಕ್ಷರ ಗಾತ್ರ

ಮಂಗಳೂರು: ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕೆಜೆಪಿ ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ಜನಪ್ರತಿನಿಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಆಗ್ರಹಿಸಿದರು.

ಮಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು,  ಇಂದಿರಾ ಗಾಂಧಿ ಅವರನ್ನು ಬಿಎಸ್.ಯಡಿಯೂರಪ್ಪ ಹೊಗಳಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, `ಯಡಿಯೂರಪ್ಪ ಕಾರ್ಯಸಾಧನೆಗಾಗಿ ಏನೂ ಮಾಡಲೂ ಹೇಸುವವರಲ್ಲ' ಎಂದರು.

`ಯಡಿಯೂರಪ್ಪ ಅವರು ಸಿಬಿಐ ತನಿಖೆಯಿಂದ ಈ ಹಂತದಲ್ಲಿ ಬಚಾವಾಗಲು  ಸಾಧ್ಯವಿಲ್ಲ. ಸಿಬಿಐ ಆರೋಪ ಪಟ್ಟಿ ಸಲ್ಲಿಸಿ ಆಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸಹಾಯ ಪಡೆಯಬೇಕಿದ್ದರೆ ಯಾವತ್ತೋ ರಾಜೀನಾಮೆ ನೀಡಬೇಕಿತ್ತು' ಎಂದರು.

`ಚುನಾವಣೆ ಹತ್ತಿರ ಬರುತ್ತಿರುವುದರಿಂದ ಪಕ್ಷದ ರಾಜ್ಯ ಘಟಕಕ್ಕೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು. ಆದರೆ, ನಾನು ಆ ಹುದ್ದೆಯ ಆಕಾಂಕ್ಷಿ ಅಲ್ಲ' ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT