ಹಾವೇರಿ: `ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದಿರುವುದಕ್ಕೆ ಬೇಸತ್ತು ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ' ಎಂದು ಕಾಂಗ್ರೆಸ್ ನಾಯಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ರುಕ್ಮಿಣಿ ಸಾವುಕಾರ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಪ್ರಾಥಮಿಕ ಸದಸ್ಯೆಯಾಗಿ ಮುಂದುವರಿಯುವುದಾಗಿ ಹೇಳಿದರು.