‘ಕೆರೆ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು 23 ವಾಣಿಜ್ಯ ಕಟ್ಟಡ ಹಾಗೂ ಮನೆಗಳು ನಿರ್ಮಾಣಗೊಂಡಿದ್ದವು. ಈ ಸಂಬಂಧ 26 ಮಂದಿ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿತ್ತು. ಅದರಂತೆ ಮಂಗಳವಾರ ಕಾರ್ಯಾಚರಣೆ ಆರಂಭಿಸಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲಾಯಿತು. ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದರು.