ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸ ಮಾಡದ ಅಧಿಕಾರಿಗಳಿಗೇಕೆ ಪಗಾರ:ಹೈಕೋರ್ಟ್‌ ಪ್ರಶ್ನೆ

Last Updated 6 ಜನವರಿ 2014, 19:54 IST
ಅಕ್ಷರ ಗಾತ್ರ

ಬೆಂಗಳೂರು: ನಿಗದಿತ ಕಾರ್ಯಕ್ಕಾಗಿ ನೇಮಿಸಲಾದ ಅಧಿಕಾರಿಗಳು ಕರ್ತವ್ಯವನ್ನು ನಿರ್ವಹಿಸದಿದ್ದಲ್ಲಿ ಅವರ ವೇತನವನ್ನು ತಡೆ ಹಿಡಿಯಲು ರಾಜ್ಯ ಸರ್ಕಾರ ಏಕೆ ಕ್ರಮ ಕೈಗೊಳ್ಳ­ಬಾರದು ಎಂದು ಹೈಕೋರ್ಟ್ ಸೋಮವಾರ ಪ್ರಶ್ನಿಸಿದೆ.

ಗುಲ್ಬರ್ಗ ನಗರದಲ್ಲಿ ತ್ಯಾಜ್ಯ ವಿಲೇವಾರಿ ಮಾಡದ ಹಿನ್ನೆಲೆಯಲ್ಲಿ ಶರಣ ದೇಸಾಯಿ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯ­ಮೂರ್ತಿ ಡಿ.ಎಚ್‌.ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಅಧಿಕಾರಿಗಳು ಕೆಲಸ ಮಾಡ­ದಿದ್ದಲ್ಲಿ ಅವರ ವೇತನವನ್ನು ತಡೆ ಹಿಡಿಯಲು ಏಕೆ ಆದೇಶಿಸಬಾರದು ಎಂದು ಮೌಖಿಕವಾಗಿ ಪ್ರಶ್ನಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಆಯುಕ್ತ ಹುದ್ದೆಗೆ ಮೇಲ್ಪಟ್ಟ ಎಲ್ಲ ಅಧಿಕಾರಿಗಳು ಇದೇ 17ರಂದು ವಿಚಾ­ರಣೆಗೆ ಹಾಜರಾಗುವಂತೆ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT