ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಸಿಡಿ ಕಾಲೇಜಿಗೆ ಸಮಗ್ರ ವೀರಾಗ್ರಣಿ

Last Updated 3 ಏಪ್ರಿಲ್ 2013, 5:56 IST
ಅಕ್ಷರ ಗಾತ್ರ

ಧಾರವಾಡ: ಇಲ್ಲಿಯ ಜೆಎಸ್‌ಎಸ್ ಕಾಲೇಜಿನ ಆಶ್ರಯದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಂಕಲ್ಪ-2013 ರಾಜ್ಯಮಟ್ಟದ ಮಾಹಿತಿ ತಂತ್ರಜ್ಞಾನ ಸ್ಪರ್ಧೆಯಲ್ಲಿ, ಒಟ್ಟು ರಾಜ್ಯದ ಬೇರೆ ಬೇರೆ ವಿಭಾಗಗಳಿಂದ 18 ಕಾಲೇಜುಗಳು ಸ್ಪರ್ಧಿಸಿದ್ದವು.

ಇದರಲ್ಲಿ ಕರ್ನಾಟಕ ವಿಜ್ಞಾನ ಕಾಲೇಜಿನ ಗಣಕಯಂತ್ರ ವಿಭಾಗದ ಬಿಎಸ್‌ಸಿ ವಿದ್ಯಾರ್ಥಿಗಳಾದ ಕೇದಾರೇಶ್ವರ ಚೌಧರಿ, ಶ್ರೀಧರ ಕುಲಕರ್ಣಿ ಹಾಗೂ ಗೌರಿ ನರಗುಂದಕರ ಪ್ಲೇಸ್‌ಮೆಂಟ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡರು. ಪ್ಲೇಸ್‌ಮೆಂಟ್ ಅಧಿಕಾರಿ ರಾಜೀವ ಹಿರೇಮಠ ಅವರು ತಂಡವನ್ನು ಮುನ್ನಡೆಸಿದ್ದರು.

ಇದರಂತೆ ಬಿಸಿಎ ವಿಭಾಗದ ವಿದ್ಯಾರ್ಥಿಗಳು ಪ್ರಸ್ತಾವನ ಸ್ಪರ್ಧೆಯಲ್ಲಿ ರವೀಂದ್ರ, ಸಾಗರ.ಸಿ.ಎ. ವಿಶಾಲ ಪಟ್ಟೇದ, ಶೀತಲ್ ಇನಾಮದಾರ್, ಲಕ್ಷ್ಮಣ ಎಂ.ಬಿ. ಪ್ರೀತಿ ಬದಿ, ಶ್ರುತಿ ಸುಣಗಾರ ಮತ್ತು ವಿಶಾಖ ಹೆಗಡೆ ಅವರು ದ್ವಿತೀಯ ಸ್ಥಾನ ಪಡೆದು ಸಮಾಧಾನಕರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT