ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಲಲಿತ ಕಲಾ ಅಕಾಡೆಮಿಗೆ ಸುಬ್ಬಣ್ಣ ನೇಮಕ

Last Updated 3 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಲಲಿತ ಕಲಾ ಅಕಾಡೆಮಿ ಹಂಗಾಮಿ ಅಧ್ಯಕ್ಷರಾಗಿ ಗ್ರಾಫಿಕ್ ಕಲಾವಿದ ಕನ್ನಡಿಗ ಕೆ.ಆರ್. ಸುಬ್ಬಣ್ಣ ನೇಮಕ ಗೊಂಡಿದ್ದಾರೆ.

ಅಕಾಡೆಮಿ ಅಧ್ಯಕ್ಷರಾಗಿದ್ದ ಅಶೋಕ್ ವಾಜಪೇಯಿ ಅವರ ನಿವೃತ್ತಿಯಿಂದ ತೆರ ವಾದ ಸ್ಥಾನಕ್ಕೆ ಸುಬ್ಬಣ್ಣ ನೇಮಕ ಗೊಂಡಿದ್ದಾರೆ. `ಕಲಾವಿದರ ಸಾಮಾನ್ಯ ಮಂಡಲಿ~ಯಿಂದ ಸುಬ್ಬಣ್ಣ ಅಕಾಡೆಮಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಅಕಾಡೆಮಿ ಸಂವಿಧಾನದ ಅನ್ವಯ ಅವರೀಗ ಹಂಗಾಮಿ ಅಧ್ಯಕ್ಷರು. ಕೇಂದ್ರ ಸರ್ಕಾರ ಹೊಸ ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ.

ಸದ್ಯ ದೆಹಲಿ ಕನ್ನಡ ಶಾಲೆಯಲ್ಲಿ ಕಲಾ ಶಿಕ್ಷಕರಾಗಿರುವ ಸುಬ್ಬಣ್ಣ ಮೂಲತಃ ಶಿವಮೊಗ್ಗ ಜಿಲ್ಲೆ ಕುಪ್ಪಗಡ್ಡೆ ಗ್ರಾಮ ದವರು. ದಾವಣಗೆರೆ ಸರ್ಕಾರಿ ಕಲಾ ಕಾಲೇಜಿನಲ್ಲಿ ಡಿಪ್ಲೊಮಾ ಪದವಿ ಪಡೆದಿರುವ ಅವರು, ಎರಡೂವರೆ ದಶಕದಿಂದ ದೆಹಲಿಯಲ್ಲಿ ನೆಲೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT