ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರಕ್ಕೆ ಆಯನೂರು ಮನವಿ

Last Updated 25 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ: ಶಿವಮೊಗ್ಗ, ಬೀದರ್‌ ಹಾಗೂ  ಹಾಸನ ಪಶುವೈದ್ಯಕೀಯ ಕಾಲೇಜಿನಲ್ಲಿ ಪದವಿ ಪಡೆದಿರುವ 99 ಮಂದಿಗೆ ವೃತ್ತಿ ಆರಂಭಿಸಲು ಅವಕಾಶ ನೀಡಬೇಕು ಸಂಸದ ಆಯನೂರು ಮಂಜುನಾಥ್‌ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಕೃಷಿ ಸಚಿವ ಶರದ್‌ ಪವಾರ್‌ ಅವರನ್ನು ಬುಧವಾರ ಭೇಟಿ ಮಾಡಿದ ಆಯನೂರು ಮಂಜುನಾಥ್‌ ಶಿವಮೊಗ್ಗ, ಬೀದರ್‌, ಹಾಸನ ಪಶುವೈದ್ಯ ಕಾಲೇಜುಗಳಿಂದ ಪದವಿ ಪಡೆದವರು ಎದುರಿಸು ತ್ತಿರುವ ಸಮಸ್ಯೆಯನ್ನು ವಿವರಿಸಿದರು.

ಭಾರತೀಯ ಪಶುವೈದ್ಯಕೀಯ ಮಂಡಳಿ ಕೂಡಲೇ ಮಧ್ಯಪ್ರವೇಶಿಸಿ, ಪದವೀಧರರಿಗೆ ಹೆಸರು ನೋಂದಾ ಯಿಸಿ ಕೊಂಡು ವೃತ್ತಿ ಆರಂಭಿಸಲು ಅನುಮತಿ ನೀಡಬೇಕು. ಅವರು ಪಡೆ ದಿರುವ ಪದವಿ ಯನ್ನು ಮಾನ್ಯಮಾ ಡಬೇಕು ಎಂದು ಆಗ್ರಹಿಸಿದರು.

ಈಗಾಗಲೇ ದೊರೆತಿರುವ ತಾತ್ಕಾಲಿಕ ಮಾನ್ಯತೆ ಕಾಯಂ ಆಗುವ ತನಕ ವೃತ್ತಿ ಆರಂಭಿಸಲು ತಾತ್ಕಾಲಿಕ ನೋಂದಣಿ ನೀಡ ಬೇಕೆಂದು ಕೋರಿದರು. ಸಂಸದರ ಮನವಿಯನ್ನು ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ಪವಾರ್‌ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT