ವಾರಾಣಸಿ (ಪಿಟಿಐ): ಮತದಾನಕ್ಕೆ ಒಂದು ದಿನ ಇರುವಾಗ (ಮೇ 11) ಇಲ್ಲಿನ ಮೌಲ್ವಿಗಳು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರಾದ ಈ ಕ್ಷೇತ್ರದಿಂದ ಉಮೇದುವಾರಿಕೆ ಮಾಡಿರುವ ಅರವಿಂದ ಕೇಜ್ರಿವಾಲ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಈ ಸಾರಿ ಲೋಕಸಭಾ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿಯನ್ನು ಬೆಂಬಲಿಸಲು ಭಾನುವಾರ ನಡೆದ ಮುಫ್ತಿ ಮಂಡಳಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಂಡಳಿಯ ಹೇಳಿಕೆ ತಿಳಿಸಿದೆ.
ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಸುಮಾರು 16 ಲಕ್ಷ ಮತದಾರರು ಇದ್ದಾರೆ. ಇವರಲ್ಲಿ ಶೇ 18ರಷ್ಟು ಮುಸ್ಲಿಮರು.