ಬೆಂಗಳೂರು: `ರಾಜ್ಯವು ದಕ್ಷತೆ ಹಾಗೂ ಕೌಶಲದಲ್ಲಿ ಮುಂಚೂಣಿಯಲ್ಲಿದೆ. ಆದರೆ, ಕೈಗಾರಿಕಾ ಕ್ಷೇತ್ರದ ಸಾಧನೆಯಲ್ಲಿ ಹಿಂದುಳಿದಿದೆ~ ಎಂದು ಆರ್ಟ್ ಆಫ್ ಲಿವಿಂಗ್ನ ಸಂಸ್ಥಾಪಕ ಶ್ರೀಶ್ರೀ ರವಿಶಂಕರ್ ಗುರೂಜಿ ಬೇಸರ ವ್ಯಕ್ತಪಡಿಸಿದರು.
ಎಫ್ಕೆಸಿಸಿಐ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.
`ಆಡಳಿತ ನಡೆಸುವವರು ಹೊಸ ಕಾನೂನು, ನೀತಿಗಳನ್ನು ಜಾರಿಗೆ ತಂದಾಗ ಈ ನೀತಿ ಸರಿಯಿಲ್ಲ ಎಂದು ಮನಸ್ಸಿನಲ್ಲಿಯೇ ಕೊರಗುತ್ತೇವೆ. ಇದರ ಬದಲು ಹಿರಿಯ ನಾಗರಿಕರ ಸಲಹಾ ಸಮಿತಿಯೊಂದನ್ನು ರಚಿಸಿಕೊಂಡು ಆಡಳಿತ ನಡೆಸುವವರಿಗೆ ಕಾಲ ಕಾಲಕ್ಕೆ ಸಲಹೆ ನೀಡಬೇಕು. ಆಗ ದೇಶ ಪ್ರಗತಿಶೀಲವಾಗುತ್ತದೆ~ ಎಂದು ಅಭಿಪ್ರಾಯಪಟ್ಟರು.