ಬೆಂಗಳೂರು: ಯುಪಿಎ–2 ಸರ್ಕಾರದ ಸಾಧನೆಗಳ ಕುರಿತ ಕೈಪಿಡಿಯನ್ನು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಮಂಗಳವಾರ ಇಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷ ಸೋಲುಂಡಿರುವುದು ಎಚ್ಚರಿಕೆಯ ಗಂಟೆ. ಆದ್ದರಿಂದ ತಪ್ಪುಗಳು ಮರುಕಳಿಸದಂತೆ, 2014ರ ಲೋಕಸಭಾ ಚುನಾವಣೆಗೆ ಕಾರ್ಯತಂತ್ರವನ್ನು ಮರು ರೂಪಿಸಲಾಗುತ್ತದೆ ಎಂದು ಹೇಳಿದರು.