ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊನೆ ಸಾಲಿನಲ್ಲಿ ಡಿವಿಎಸ್

Last Updated 23 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಆರಂಭವಾದ ಮೊದಲ ದಿನ ಎರಡನೇ ಸಾಲಿನಲ್ಲಿ ಕುಳಿತ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು, ಸೋಮವಾರ ಕೊನೇ ಸಾಲಿನಲ್ಲಿ ಕುಳಿತು ಕಲಾಪದಲ್ಲಿ ತೊಡಗಿಸಿಕೊಂಡರು.

ಪರಿಷತ್ತಿನ ಮೂಲಗಳ ಪ್ರಕಾರ, ಡಿ.ವಿ. ಸದಾನಂದಗೌಡ ಅವರೇ ಕೊನೇ ಸಾಲಿನಲ್ಲಿ ತಮಗೆ ಆಸನ ನೀಡುವಂತೆ ಕೋರಿದ್ದಾರೆ ಎನ್ನಲಾಗಿದೆ. ಅಧಿಕಾರ ತ್ಯಜಿಸಿದ ಬಳಿಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ವಿಧಾನಸಭೆಯಲ್ಲಿ ಕೊನೇ ಸಾಲಿನಲ್ಲಿ ಆಸೀನರಾಗಿದ್ದಾರೆ.

ಚಲನಚಿತ್ರ ನಟ ರಾಜೇಶ್ ಖನ್ನಾ ಹಾಗೂ ಮಾಜಿ ಶಾಸಕ ವಿ.ಎಲ್. ಶಿವಪ್ಪ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಿ, ಕಲಾಪವನ್ನು 10 ನಿಮಿಷ ಮುಂದೂಡಿದ ವೇಳೆ ಸದಾನಂದಗೌಡ ಅವರು ಕೆಲವು ಸದಸ್ಯರು ಹಾಗೂ ಅಧಿಕಾರಿಗಳತ್ತ ಕೈ ತೋರಿಸಿ ಸದನದಿಂದ ನಿರ್ಗಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT