ಜಗದೀಶ ಶೆಟ್ಟರ್ ನೀರು ಬಿಡಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಅಲ್ಪಸಂಖ್ಯಾತರಿಗೆ ಬರುವ ದಿನಗಳಲ್ಲಿ ಎರಡು ಸಾವಿರ ಕೋಟಿಯಷ್ಟು ಹಣ, ಪರಿಶಿಷ್ಟ ಜಾತಿ ಮತ್ತು ಜನಾಂಗದವರ ಅಭಿವೃದ್ಧಿಗಾಗಿ ಐದು ಸಾವಿರ ಕೋಟಿ ಹಣವನ್ನು ಮೀಸಲಿಡಲಿದ್ದೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಪ್ರತಿಯೊಬ್ಬ ವ್ಯಕ್ತಿ ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷ ಕೆ. ಮುಕಡಪ್ಪ ಸಭೆಯಲ್ಲಿ ಮಾತನಾಡಿದರು. ವೇದಿಕೆಯ ಮೇಲೆ ತೇರದಾಳ ಕೆಜೆಪಿ ಅಧ್ಯಕ್ಷ ವಿನೋದ ಪತ್ತಾರ, ಅಹಮ್ಮದ ಖಾನ, ಮಲ್ಲು ಬಾಳಿಕಾಯಿ ರೂಪಾ ಬಾಳಿಕಾಯಿ, ವಿವೇಕಾನಂದ ಹುಲ್ಯಾಳ ಮುಂತಾದವರು ಉಪಸ್ಥಿತರಿದ್ದರು.
ಕೆಜೆಪಿ ಅಭ್ಯರ್ಥಿ ಬಸವರಾಜ ಬಾಳಿಕಾಯಿ ಸ್ವಾಗತಿಸಿದರು. ನಗರ ಕೆಜೆಪಿ ಅಧ್ಯಕ್ಷ ವಿನೋದ ಪತ್ತಾರ ನಿರೂಪಿಸಿದರು.