ಹೊರಮಾವು - ಅಗರ, ಚೈತನ್ಯ ಬಡಾವಣೆಯಲ್ಲಿ ಶಾಸಕರ ಅನುದಾನದಿಂದ ಕೊಳವೆ ಬಾವಿ ನೀರು ಪೂರೈಕೆ ಯೋಜನೆಗೆ ಈಚೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾವೇರಿ ನೀರು ಪೂರೈಕೆ ಯೋಜನೆಗೆ ಬಿಬಿಎಂಪಿಗೆ ಸೇರಿದ ಗ್ರಾಮಗಳು ಸೇರ್ಪಡೆಯಾಗಿಲ್ಲ. ಉಚಿತ ಟ್ಯಾಂಕರ್ ನೀರಿನ ವ್ಯವಸ್ಥೆಯೂ ಇಲ್ಲ. ಹಾಗಾಗಿ ನಾಗರಿಕರ ಕೋರಿಕೆಯಂತೆ ಶಾಸಕರ ಅನುದಾನದಡಿ ಕೊಳವೆ ಬಾವಿ ಮೂಲಕ ನೀರು ಪೂರೈಕೆಗೆ ಚಾಲನೆ ನೀಡಲಾಗಿದೆ. ಚೇಳಕೆರೆ ಗ್ರಾಮದಲ್ಲೂ ಎರಡು ಕೊಳವೆ ಬಾವಿಗಳನ್ನು ಕೊರೆಯಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.