ಯೋಜನೆ ಜಾರಿ: ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗರಿಕ ಸನ್ನದು ಜಾರಿಗೊಳಿಸಲು ಮುಂದಿನ ಸಚಿವ ಸಂಪುಟದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಶೀಘ್ರ ಕಡತ ವಿಲೇವಾರಿಗಾಗಿ ಮುಖ್ಯಮಂತ್ರಿ ಅವರ ಕಚೇರಿಯಲ್ಲಿ 24X7ಯೋಜನೆ ರೂಪಿಸಿದ್ದು, ಈ ಮೂಲಕ ತೊಂದರೆಗೊಳಗಾದ ನಾಗರಿಕರು ರಾಜ್ಯದ ಯಾವುದೇ ಭಾಗದಿಂದ ಸಂಪರ್ಕಿಸಿ ಸಮಸ್ಯೆ ತಿಳಿಸಿ ಪರಿಹಾರ ಕಂಡುಕೊಳ್ಳಬಹುದು ಎಂದರು.