ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರಂ ಅಭಾವ: ತಾ.ಪಂ. ಸಭೆ ಮುಂದೂಡಿಕೆ

Last Updated 15 ಡಿಸೆಂಬರ್ 2012, 6:15 IST
ಅಕ್ಷರ ಗಾತ್ರ

ಕೂಡ್ಲಿಗಿ: ಸದಸ್ಯರ ಕೋರಂ ಇಲ್ಲದ ಕಾರಣ ಶುಕ್ರವಾರ ನಡೆಯಬೇಕಿದ್ದ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯನ್ನು ಡಿಸೆಂಬರ್ 20ಕ್ಕೆ ಮುಂದೂಡಲಾಗಿದೆ ಎಂದು ತಾ.ಪಂ ಕಾರ್ಯನಿರ್ವಹಣಾಧಿಕಾರಿ ಸಣ್ಣವೀರಣ್ಣ ತಿಳಿಸಿದರು.

ವ್ಯವಹಾರ: ಸಭೆಗೆ ಗೈರಾದ ತಾ.ಪಂ ಸದಸ್ಯರು
ಕೂಡ್ಲಿಗಿ: ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಇದುವರೆಗೂ ಸೂಕ್ತ ಉತ್ತರ ದೊರೆಯದೇ ಇರುವುದರಿಂದ ತಾ.ಪಂ ಸಾಮಾನ್ಯ ಸಭೆಗೆ ಗೈರು ಹಾಜರಾಗಿರುವುದಾಗಿ ನೊಂದ ಸಮಾನ ಮನಸ್ಕ ತಾ.ಪಂ ಸದಸ್ಯರ ಪರವಾಗಿ ಸದಸ್ಯೆ ವಿ.ಮಂಗಳಮ್ಮ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರವೊಂದನ್ನು ಸಲ್ಲಿಸಿದ್ದಾರೆ.

2011ರ ಫೆಬ್ರವರಿ 17ರಿಂದ ಇದುವರೆಗೂ ನಡೆದ ಸಾಮಾನ್ಯ ಸಭೆಯಲ್ಲಿ ಯಾವುದೇ ಸದಸ್ಯರ ಪ್ರಶ್ನೆಗಳಿಗೆ ಲಿಖಿತ ಉತ್ತರ ದೊರೆಯದಿರುವುದು ತಮಗೆ ಬೇಸರವನ್ನುಂಟು ಮಾಡಿದೆ. ಅದಕ್ಕಾಗಿ ಸಾಮಾನ್ಯ ಸಭೆಗೆ ತಾ.ಪಂ ಸದಸ್ಯರೆಲ್ಲರೂ ಗೈರು ಹಾಜರಾಗಿರುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT