ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರ್ಟ್‌ಗೆ ಪಿಳ್ಳೈ ಶರಣು

Last Updated 18 ಫೆಬ್ರುವರಿ 2011, 17:15 IST
ಅಕ್ಷರ ಗಾತ್ರ

ಕೊಚ್ಚಿ, (ಪಿಟಿಐ): ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಒಂದು ವರ್ಷದ ಜೈಲುಶಿಕ್ಷೆಗೆ ಗುರಿಯಾದ ಕೇರಳದ ಮಾಜಿ ವಿದ್ಯುತ್ ಸಚಿವ ಹಾಗೂ ಕೇರಳ ಕಾಂಗ್ರೆಸ್ (ಬಿ) ಮುಖಂಡ ಬಾಲಕೃಷ್ಣ ಪಿಳ್ಳೈ ಅವರು ಶುಕ್ರವಾರ ವಿಶೇಷ ನ್ಯಾಯಾಲಯದಲ್ಲಿ ಶರಣಾದರು.

76ರ ಹರೆಯದ ಪಿಳ್ಳೈ ಅವರು ನ್ಯಾಯಾಲಯದ ಮುಂದೆ ಶರಣಾಗುತ್ತಾರೆ  ಎನ್ನುವ ಸುದ್ದಿ ತಿಳಿದು ಪಕ್ಷದ ಕಾರ್ಯಕರ್ತರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸಿದ್ದರು. ಪಿಳ್ಳೈ ಅವರು ನ್ಯಾಯಾಲಯದಲ್ಲಿ ಶರಣಾಗಬೇಕು ಇಲ್ಲದಿದ್ದಲ್ಲಿ ಅವರ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿತ್ತು.

ಭ್ರಷ್ಟಾಚಾರ ಪ್ರಕರಣದಲ್ಲಿ ಮೂರನೇ ಆಪಾದಿತನಾದ ಗುತ್ತಿಗೆದಾದ ಪಿ.ಕೆ. ಸಜೀವನ್ ಕೂಡ ನ್ಯಾಯಾಲಯಕ್ಕೆ ಶರಣಾದರು. ಎರಡನೇ ಆರೋಪಿ ಹಾಗೂ ಕೆಎಸ್‌ಇಬಿ ಮಾಜಿ ಅಧ್ಯಕ್ಷ ರಾಮಭದ್ರನ್ ನಾಯರ್ ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ತಮಗೆ ಕಾಲಾವಕಾಶ ಬೇಕೆಂದು ಕೋರಿ ಪಿಳ್ಳೈ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ 2 ದಿನಗಳ ಹಿಂದೆ ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT