ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರ್ಟ್‌ಗೆ ಲೆನಿನ್ ಹಾಜರು

Last Updated 6 ಜುಲೈ 2012, 19:30 IST
ಅಕ್ಷರ ಗಾತ್ರ

ರಾಮನಗರ: ಬಿಡದಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಮೇಲೆ ರಾಸಲೀಲೆ ಪ್ರಕರಣ ಹೂಡಿರುವ ಲೆನಿನ್‌ಕುರುಪ್ಪನ್ ಶುಕ್ರವಾರ ರಾಮನಗರದ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರಾದರು.

ರಾಸಲೀಲೆಯ ಪ್ರಕರಣದ ಸಿ.ಡಿ ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರನಟಿ ರಂಜಿತಾ ಹೂಡಿದ್ದ ಮೊಕದ್ದಮೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ಲೆನಿನ್ ವಿಚಾರಣೆ ಎದುರಿಸಿದರು.

ಬೇರೆ ಪ್ರಕರಣದಲ್ಲಿ ತಮಿಳುನಾಡಿನಲ್ಲಿ ಬಂಧನದಲ್ಲಿದ್ದ ಲೆನಿನ್ ಈ ಹಿಂದೆ ವಿಚಾರಣೆಗೆ ರಾಮನಗರ ನ್ಯಾಯಾಲಯಕ್ಕೆ ಆಗಮಿಸಿರಲಿಲ್ಲ. ಇದರಿಂದ ನ್ಯಾಯಾಧೀಶರು ಖುದ್ದು ಹಾಜರಿಗೆ ಸಮನ್ಸ್ ಜಾರಿಗೊಳಿಸಿದ್ದರು.

ತಮಿಳುನಾಡಿನಲ್ಲಿ ಈಚೆಗೆ ಜಾಮೀನು ದೊರೆತಿತ್ತು. ಲೆನಿನ್ ಶುಕ್ರವಾರ ರಾಮನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಎನ್.ರೂಪಾ ಅವರು ವಿಚಾರಣೆ ಸೆಪ್ಟೆಂಬರ್ 29ಕ್ಕೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT