ನಮ್ಮ ಹಕ್ಕುಗಳಿಗೆ ಯಾವುದೇ ರೀತಿಯಲ್ಲಿ ಧಕ್ಕೆ ತರಬಾರದು ಎಂದು ಅವರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅನುರಾಗ್ ತಿವಾರಿ ಅವರು, ವಿನಾಯಿತಿ ಕೋರಿ ಅರ್ಜಿ ಸಲ್ಲಿಸುವವರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಸಮರ್ಪಕವಾಗಿ ದಾಖಲೆಗಳನ್ನು ನೀಡಿದವರಿಗೆ ವಿನಾಯಿತಿ ಹಕ್ಕು ನೀಡಲಾಗುತ್ತಿದೆ ಎಂದು ಹೇಳಿದರು.
ಇದಕ್ಕೂ ಮೊದಲು ನಗರದ ಕಾಫಿ ಸೊಸೈಟಿ ಕಚೇರಿಯಲ್ಲಿ ಸಭೆ ಸೇರಿದ ಒಕ್ಕೂಟಗಳ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಪರಸ್ಪರ ಹಂಚಿಕೊಂಡಿದ್ದರು. ಅಖಿಲ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಮಾತಂಡ ಮೊಣ್ಣಪ್ಪ, ಉಪಾಧ್ಯಕ್ಷ ಎನ್. ಮಾದಯ್ಯ ಸುಬ್ರಮಣಿ, ಖಜಾಂಚಿ ಮಂಡೇಪಂಡ ಸುಗುಣ ಮುತ್ತಣ್ಣ, ಜಂಟಿ ಕಾರ್ಯದರ್ಶಿ ರಾಜಾ ನಂಜಪ್ಪ, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಪೈಕೇರಾ ಅನಂತರಾಮ, ಪದಾಧಿಕಾರಿಗಳಾದ ಕೆ.ಆರ್. ಅನಂತಕುಮಾರ್, ಹೊಸೂರು ರಮೇಶ್ ಜೋಯಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ. ಪ್ರದೀಪ್, ಕೊಲ್ಯದ ಗಿರೀಶ್, ಯಾಲದಾಳು ಮನೋಜ್ ಬೋಪಯ್ಯ ಇದ್ದರು.