ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲ ಬೆಳೆಸಿಕೊಳ್ಳಲು ಕರೆ

Last Updated 3 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: `ವಿದ್ಯಾರ್ಥಿಗಳು ತಮ್ಮ ಕೌಶಲವನ್ನು ಬೆಳೆಸಿಕೊಂಡು, ದೇಶದ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಲು ಶ್ರಮಿಸಬೇಕು' ಎಂದು ಅದಮ್ಯ ಚೇತನದ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೇಳಿದರು.

ಶ್ರೀಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶನಿವಾರ ನಡೆದ ಎಲ್‌ಕೆಜಿಯಿಂದ ಎಸ್ಸೆಸ್ಸೆಲ್ಸಿ ವರೆಗಿನ ಪ್ರತಿಭಾವಂತ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

`ವಿದ್ಯಾರ್ಥಿಗಳು ಜೀವನದ ಗತಿಯನ್ನೇ ಬದಲಿಸುವಂತವರಾಗಬೇಕು. ಪ್ರತಿಭೆ ಉನ್ನತಿಗೆ ಮಾತ್ರ ಬಳಕೆಯಾಗದೆ, ದೇಶದ ಅಭಿವೃದ್ಧಿಗೆ ಬಳಸಬೇಕು. ಹೆಚ್ಚಿನ ಜ್ಞಾನ ಸಂಪಾದನೆಗೆ ವಿದೇಶಗಳಿಗೆ ಹೋದ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿ ಈ ನಾಡಿನಲ್ಲಿಯೇ ತಮ್ಮ ಸೇವೆಯನ್ನು ಸಲ್ಲಿಸಬೇಕು' ಎಂದರು.

ಶ್ರೀಕೃಷ್ಣ ಇಂಟರ್‌ನ್ಯಾಷನಲ್ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಎಂ.ರುಕ್ಮಾಂಗದ ನಾಯ್ಡು ಮಾತನಾಡಿ, `ಮನುಷ್ಯನಿಗೆ ಬುದ್ಧಿ ಒಂದಿದ್ದರೆ ಸಾಲದು. ಸಾಮಾನ್ಯ ಜ್ಞಾನವೂ ಅಗತ್ಯವಾಗಿದೆ. ತಾವು ಸಾಧಿಸಿದ ಸಾಧನೆಯನ್ನು ತಲೆಗೆ ಏರಿಸಿಕೊಂಡವರು ಬದುಕಿನಲ್ಲಿ ಏನು ಸಾಧಿಸಲಾರರು' ಎಂದರು.

`ಕಾಲೇಜು ಜೀವನ ಮುಗಿದ ತಕ್ಷಣವೇ ನಿಜವಾದ ಜೀವನ ಆರಂಭವಾಗುತ್ತದೆ. ಆಗ ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗುತ್ತವೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT