ತರಬೇತಿಯು ಹೆಚ್ಚು ಪ್ರಾಯೋಗಿಕವಾಗಿರಬೇಕು. ಆಗ ಮಾತ್ರ ಉದ್ಯೋಗ ಪಡೆಯಲು ಸಾಧ್ಯ. ಇಲಾಖೆಯ ವತಿಯಿಂದ ನಡೆಸುವ ಉದ್ಯೋಗ ಮೇಳವನ್ನು ಸದುಪಯೋಗ ಪಡೆದುಕೊಳ್ಳಿ ಎಂದರು. ಕೊಡಗು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ಇಂದು ಮೌಲ್ಯಯುತ ಶಿಕ್ಷಣ ದೊರೆಯುತ್ತಿಲ್ಲ. ಬಾವಿ ಶಿಕ್ಷಕರು ಮುಂದಿನ ಭವಿಷ್ಯದ ಪ್ರಜೆಗಳಿಗೆ ನೈತಿಕ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡವಂತಾಗಬೇಕು ಎಂದರು.
ಪ್ರಾಂಶುಪಾಲ ಕುಮಾರ್ ಮಾತನಾಡಿ, ಪ್ರಶಿಕ್ಷಣಾರ್ಥಿಗಳು ಉತ್ತಮ ಅಭ್ಯಾಸ ಮಾಡಿ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಕಾರ್ಯದರ್ಶಿ ಎಂ.ಸಂದೀಪ, ಶಿಕ್ಷಣ ಸಂಯೋಜಕ ಕೆ.ವಿ.ಸುರೇಶ್, ಜಿಲ್ಲಾ ಉಚಿತ ಕಾನೂನು ಸಲಹೆಗಾರ ಜಯಪ್ಪ ಇದ್ದರು.