ವಿಶ್ವ ಕಪ್ ಕ್ರಿಕೆಟ್ ಹತ್ತಿರ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕಾ ಸಮೂಹ ಭಾರತ ತಂಡಕ್ಕೆ ಶುಭ ಹಾರೈಸಲು ನಗರದ ವಿವಿಧೆಡೆ ಹಸ್ತಾಕ್ಷರ ಸಂಗ್ರಹ ಅಭಿಯಾನ ನಡೆಸುತ್ತಿದ್ದು, ಕ್ರೀಡಾಭಿಮಾನಿಗಳು, ಜೀವನದ ವಿವಿಧ ರಂಗದ ಗಣ್ಯರು, ಜನಪ್ರತಿನಿಧಿಗಳು, ಸೆಲೆಬ್ರಿಟಿಗಳು, ಪುಟಾಣಿಗಳೆಲ್ಲ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.