ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್: ಬಂಗಾಳ ತಂಡಕ್ಕೆ ಸೌರವ್ ಗಂಗೂಲಿ ಸಾರಥ್ಯ

Last Updated 18 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ವಿಜಯ್ ಹಜಾರೆ ಕ್ರಿಕೆಟ್ ಟೂರ್ನಿಯಲ್ಲಿ ಬಂಗಾಳ ತಂಡವನ್ನು ಮುನ್ನಡೆಸಲಿದ್ದಾರೆ.

ತಂಡದ ನಾಯಕರಾಗಿದ್ದ ಮನೋಜ್ ತಿವಾರಿ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಕಾರಣ ಗಂಗೂಲಿಗೆ ಈ ಜವಾಬ್ದಾರಿ ಲಭಿಸಿದೆ. ಉಪ ನಾಯಕನ ಹೆಸರನ್ನು ಆಯ್ಕೆ ಸಮಿತಿ ಇನ್ನೂ ಪ್ರಕಟಿಸಿಲ್ಲ. ಫೆಬ್ರುವರಿ 20ರಿಂದ 28ರ ವರೆಗೆ ನಡೆಯಲಿರುವ ವಲಯ ಮಟ್ಟದ ಲೀಗ್ ಟೂರ್ನಿಯಲ್ಲಿ ಬಂಗಾಳ ಎದುರು ಒಡಿಶಾ ಆಡಲಿದೆ. ಈ ವರ್ಷದ ರಣಜಿ ಋತುವಿನಲ್ಲಿ ಮಾಜಿ ನಾಯಕ ಮೂರು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು.

ರಾಜ್ಯ ಕ್ರಿಕೆಟ್ ಆಯ್ಕೆ ಸಮಿತಿ ಮುಖ್ಯಸ್ಥ ದೀಪ್ ದಾಸಗುಪ್ತ ತಂಡದ ಆಯ್ಕೆ ಪಟ್ಟಿಯನ್ನು ಶನಿವಾರ ಪ್ರಕಟಿಸಿದರು. ಐಪಿಎಲ್ ಐದನೇ ಆವೃತ್ತಿಯಲ್ಲಿ `ದಾದಾ~ ಪುಣೆ ವಾರಿಯರ್ಸ್ ತಂಡದ ನಾಯಕರಾಗಿದ್ದಾರೆ. ಅಂತರರಾಷ್ಟ್ರೀಯ ಆಟಗಾರ ವೃದ್ಧಿಮಾನ್ ಸಹಾ ತಂಡದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT