ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾ ಪ್ರಾಧಿಕಾರಕ್ಕೆ ಜಯ

Last Updated 10 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಕರ್ನಾಟಕ ವಾಲಿಬಾಲ್ ಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯ `ಎ~ ಡಿವಿಷನ್ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಬುಧವಾರದ ಪಂದ್ಯದಲ್ಲಿ 3-0       ಸೆಟ್‌ಗಳಲ್ಲಿ ಬಿಇಎಲ್ ತಂಡವನ್ನು ಮಣಿಸಿತು.

ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕ್ರೀಡಾ ಪ್ರಾಧಿಕಾರ ಮೊದಲ ಸೆಟ್‌ನಲ್ಲಿ ಭಾರೀ ಪೈಪೋಟಿ ನಡೆಸಿ 31-29 ಕೇವಲ ಎರಡು ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಿತು. ಮುಂದಿನ ಎರಡು ಸೆಟ್‌ಗಳಲ್ಲಿ 25-12, 25-22ರಲ್ಲಿ ಬಿಇಎಲ್ ಎದುರು ಸುಲಭ ಗೆಲುವು ಸಾಧಿಸಿತು. ಒಂದು ಗಂಟೆ ಕಾಲ ನಡೆದ ಹಣಾಹಣಿಯಲ್ಲಿ ಪ್ರಜ್ವಲ್ ಹಾಗೂ ಜಗದೀಶ್ ಅವರ ಚುರುಕಾದ ಆಟ ಕ್ರೀಡಾ ಪ್ರಾಧಿಕಾರಕ್ಕೆ ಗೆಲುವು ತಂದುಕೊಟ್ಟಿತು.

ದಿನದ ಇನ್ನೊಂದು ಪಂದ್ಯದಲ್ಲಿ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್‌ಎಲ್) 3-1 (20-25, 25-15, 25-21, 25-23) ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಎದುರು ಜಯ ಪಡೆಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT