ಯಲಹಂಕ: `ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಯುವಕರ ಭವಿಷ್ಯ ಉತ್ತಮ ರೀತಿಯಲ್ಲಿ ರೂಪುಗೊಳ್ಳುತ್ತದೆ' ಎಂದು ಶಾಸಕ ಕೃಷ್ಣಬೈರೇಗೌಡ ಹೇಳಿದರು.
ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಬಸವಲಿಂಗಪ್ಪ ನಗರದಲ್ಲಿ ಜಕ್ಕೂರು ವಾರ್ಡ್ ಕಾಂಗ್ರೆಸ್ ಕಾರ್ಯಕರ್ತರ ವತಿಯಿಂದ ಈಚೆಗೆ ನಡೆದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಪಂ ಮಾಜಿ ಅಧ್ಯಕ್ಷ ರವಿಕುಮಾರ್, ಮಾಜಿ ಸದಸ್ಯ ಗೋಪಾಲಯ್ಯ, ನಗರಸಭೆಯ ಮಾಜಿ ಅಧ್ಯಕ್ಷ ಶ್ರೀನಿವಾಸರಾಜು, ಕಾಂಗ್ರೆಸ್ ಮುಖಂಡರಾದ ಆಂಜಿನಪ್ಪ, ಸುಬ್ರಮಣಿ, ಗುರುಪ್ರಸಾದ್, ಆನಂದ್, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.