ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ

Last Updated 23 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಗುಲ್ಬರ್ಗ:  ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ; ಕ್ರೀಡಾ ಮನೋಭಾವ ಮುಖ್ಯ ಎಂದು ಇಲ್ಲಿನ  ಮೇಯರ್ ಅಶ್ಫಾಕ್ ಚುಲ್‌ಬುಲ್ ಕಿವಿಮಾತು ಹೇಳಿದರು.

ಇಲ್ಲಿನ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ (14ಮತ್ತು 17 ವರ್ಷ ವಯೋಮಿತಿ ಒಳಗಿನ ) ಬಾಲಕ, ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹೈದಾರಾಬಾದ್ ಕರ್ನಾಟಕ ಪ್ರದೇಶದಲ್ಲಿ ಹಲವು ಕ್ರೀಡಾ ಪ್ರತಿಭೆಗಳಿವೆ. ಅಂಥ  ಕ್ರೀಡಾಪಟುಗಳನ್ನು ಮುಖ್ಯವಾಹಿನಿಗೆ ತರುವಂಥ ಕಾರ್ಯ ನಡೆಯಬೇಕು. ಈ ಭಾಗದ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಹೆಸರನ್ನು ಉಳಿಸುವಂತಾಗಬೇಕು ಎಂದು ಹೇಳಿದರು.

 ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಶಂಭುಲಿಂಗ ಗುಂಡಗುರ್ತಿ ಮಾತನಾಡಿದರು. ನೌಕರರ ಸಂಘದ ಅಧ್ಯಕ್ಷ ಬಿ.ಎಸ್. ದೇಸಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಸ್. ಪರಮೇಶ, ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಡಿ. ರವೀಂದ್ರಕುಮಾರ ಮತ್ತಿತರರು ಪಾಲ್ಗೊಂಡಿದ್ದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT